ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ (ಎನ್ಸಿಡಿಎಫ್ಐ)ವು ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಹಾಲು ಮತ್ತು ಹಾಲಿನ ಉತ್ಪಾದನೆ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಕೆಎಂಎಫ್ಗೆ ಪ್ರಶಸ್ತಿಯ ಭಾಗ್ಯ ಒಲಿದು ಬಂದಿದೆ.
ಗುಜರಾತ್ ರಾಜ್ಯದ ಗಾಂಧಿ ನಗರದಲ್ಲಿ ಎನ್ಸಿಡಿಎಫ್ಐ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಅವರು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಷಾ ಅವರು, ದೇಶದಲ್ಲಿಗ ಅಮೂಲ್ ಸಂಸ್ಥೆ ಮೊದಲ ಸ್ಥಾನದಲ್ಲಿದೆ. ನಂತರದಲ್ಲಿ ಕರ್ನಾಟಕದ ಕೆಎಂಎಫ್ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಕರ್ನಾಟಕವಲ್ಲದೇ ನೆರೆಯ ಬಹುತೇಕ ರಾಜ್ಯಗಳಲ್ಲಿಯೂ ನಂದಿನಿ ಬ್ರಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪಾದನೆಗಳನ್ನು ರೈತ ಸಮುದಾಯಕ್ಕೆ ನೀಡುತ್ತಿದೆ. ಈ ಮೂಲಕ ಹೈನು ಉದ್ಯಮ ಬೆಳೆಯಲು ಈ ಸಂಸ್ಥೆಯು ಹೆಚ್ಚು ಸಹಕಾರಿಯಾಗಿದೆ ಎಂದರು.
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ .
ಕಹಾಮ ಸಂಕೀರ್ಣ, ಅಂಚೆ ಪೆಟ್ಟಿಗೆ ಸಂಖ್ಯೆ- 2915,
ಡಿ. ಆರ್. ಕಾಲೇಜು ಅಂಚೆ, ಡಾ.ಎಂ.ಹೆಚ್.ಮರಿಗೌಡ ರಸ್ತೆ,
ಬೆಂಗಳೂರು-560029, ಕರ್ನಾಟಕ.
080-260 96800
ಸಹಾಯವಾಣಿ:
1800 425 8030 toll free 10.00AM - 5.30PM
(ಎರಡನೇ ಶನಿವಾರ, ನಾಲ್ಕನೇ ಶನಿವಾರ, ಭಾನುವಾರ ಹಾಗು ಇತರೆ ರಾಜ್ಯ ಸರ್ಕಾರ ರಜಾ ದಿನಗಳನ್ನು ಹೊರತು ಪಡಿಸಿ)
ನಂದಿನಿ ನೆರವು ದೂರವಾಣಿ ಸಂಖ್ಯೆ (24*7):
080-66660000
ಫಾಕ್ಸ್:: 080-255 36105